ಎದೆಯಾಳದಿಂದ......

ತಡಕಾಡಿ ಪದಗಳಿಗೆ ಬರೆದೆ ಕವನ.
ತಡೆ ತಡೆದು ಹೊಸತೊಂದು ಭಾವ ಸ್ಪುರಣ.
ಸಂತಸದ ಮತ್ತಿನಲಿ ಹೆಚ್ಚೇನು ಹೇಳಲಿ?
ಹೇಳು,ನೀ ಎಂದು ಬರುವೆ ನನ್ನೀ ಬಾಳಲಿ?

ಹೇಳುವರು ಅವರು ನೀ ನನ್ನಲೊಂದು ಬಹು ಹಳೆಯಕಾಲದಿಂದ,
ಮುಂದೂನು ಹೀಗೆ ಇರುವುದಂತೆ ಈ ನಮ್ಮ ಸಂಬಂಧ.
ಆ ಹಿಂದೂ ಮುಂದು ನನಗೀಗ ಬೇಡ ,ನಾ ಕಾಣಲಿಲ್ಲವಲ್ಲ!
ಈ ದಿನವೇ ಸತ್ಯ ,ಅದರಲ್ಲೇ ನಿತ್ಯ ನನ್ನ ಪ್ರತೀಕ್ಷೆಯೆಲ್ಲ.

ನೀನೆಲ್ಲೇ ಇರಲಿ,ನೀ ಹೇಗೆ ಇರಲಿ ನನಗಿಲ್ಲ ಅದರ ಚಿಂತೆ,
ಕಪ್ಪಾದರೇನು? ಬಿಳುಪಾದರೇನು? ಒಂದೊಂದು ಬಣ್ಣದಂತೆ.
ಕೊಟ್ಟಾದಮೇಲೆ ಮನಸನ್ನು ನಿನಗೆ ಕಿತ್ತಿಡಲು ಸಾಧ್ಯವೇನು?
ಮನದಲ್ಲೇ ಹೀಗೆ ಬಿಕನಾಸಿಯೆಂದು ನೀ ನನ್ನ ತಿಳಿದೆಯೇನು?

ಹೇಳುವೆನು ಕೇಳು ನಾ ಇಲ್ಲೇ ಹೀಗೆ ಮಾತಲ್ಲ ನನ್ನ ಗೀಳು.
ಕೈ ಹಿಡಿದ ಮೇಲೆ ಬಿಡಲಾರೆ ನಾನು ಕೊನೆವರೆಗೂ ಜೋಡಿ ಬಾಳು.
ಕೇಳುವೆನು ನಾನು ನಿನ್ನಲ್ಲಿ ಒಂದು ತಪ್ಪೇನು ಇಲ್ಲ ತಾನೇ?
ಬರುವವಳೇ ನೀನು ಆಗಿರಲೆಬೇಕು ಬಂಗಾರಗುಣದ ಕನ್ಯೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬೆಳಕು ಬಿದ್ದೊಡನೆ (ಕಥೆ )

ಸವೆದ ಕಲ್ಲಿನ ಹಿಂದೆ (ಕಥೆ)

ಇಬ್ಬಗೆಯ ನೀತಿ ಏಕೆ?