ಪೋಸ್ಟ್‌ಗಳು

ಸೆಪ್ಟೆಂಬರ್, 2016 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ರಂಗ ವಿಚಾರ (ಕಥೆ)

ಇಮೇಜ್
        'ಶ್ರೀ......ಗುರುಗಣಾಧಿಪತಯೇ......... ನಮಃ....... ಸಕಲ ಕಾರ್ಯ........ವಿಜಯೀ ಭವ..........' ಕಂಚಿನ ಕಂಠದಲ್ಲಿ ಈ ಗಾನ  ಕೇಳಿಬರುತ್ತಲೇ ಗುಜುಗುಜು ಸದ್ದಿನ ಜನಸ್ತೋಮವೆಲ್ಲ ಸ್ತಬ್ಧವಾಯಿತೆಂದೇ ಅರ್ಥ.  ಆ ಧ್ವನಿಗೆ  ಮಂತ್ರ ಮುಗ್ಧನಾಗದ ಯಕ್ಷಗಾನ ಪ್ರೇಮಿಯೇ ಇಲ್ಲ. ಆ ಅದ್ಭುತ ಕಂಠವನ್ನು ಆಲಿಸದ ಯಕ್ಷಪ್ರೇಮಿ ಯಾರಾದರೂ ಇದ್ದಾನೆಂದು ಹೇಳಿದರೆ ಆತ ನಿಜವಾದ ಯಕ್ಷಾಭಿಮಾನಿಯೇ ಅಲ್ಲ ಎನ್ನುವುದು ನನ್ನ ಅಭಿಮತ. ಎತ್ತರದ ಧ್ವನಿಯಲ್ಲಿ ಒಂದು ಸ್ವಲ್ಪವೂ ಕೊಂಕಿಲ್ಲದಂತೆ ಹಾಡುತ್ತಾ ವಿವಿಧ ಮಜಲುಗಳಲ್ಲಿ ತೆರೆದುಕೊಳ್ಳುವ  ಆ ಶೈಲಿಯೇ ಅನುಪಮ. ಯಕ್ಷಲೋಕದ ಹಲವು ತಾರೆಗಳಲ್ಲಿ ಈ ಧ್ವನಿಯ ಗಾರುಡಿಗನನ್ನು ದ್ರುವತಾರೆ ಎಂದು  ಕರೆಯುವುದರಲ್ಲಿ ಯಾವುದೇ ಅತಿಶಯ ಇಲ್ಲ ಎಂಬುದು  ಅವರ ಭಾಗವತಿಕೆಯನ್ನು ಕೇಳಿದ ಪ್ರತಿಯೊಬ್ಬನಿಗೂ ಅನ್ನಿಸುವ ಪ್ರಾಮಾಣಿಕ ಅನಿಸಿಕೆ. ನಾನು ಯಾರ ಬಗ್ಗೆ ಬರೆಯುತ್ತಿದ್ದೇನೆ ಎಂದು ಈಗಾಗಲೇ ತಿಳಿದಿರಬೇಕಲ್ಲ...ಹೌದು ನಾನು ಬರೆಯುತ್ತಿರುವುದು  ಗುಜ್ಜೂರು ರಾಮ ಭಂಡಾರಿಯವರ ಬಗ್ಗೆಯೇ.              ನನಗೆ ಯಕ್ಷಗಾನದ ಖಯಾಲಿ ತುಂಬಾ ಇದೆ. ಆಗೀಗ ಅಲ್ಲಿಲ್ಲಿ ಸಣ್ಣ ಪುಟ್ಟ ವೇಷಗಳನ್ನು ಹಾಕಿದ ಉದಾಹರಣೆಗಳೂ ಇವೆ. ಈ ಘಟ್ಟದ ಕೆಳಗಿನ ಪ್ರದೇಶದವರಿಗೆ ಯಕ್ಷಗಾನದಲ್ಲಿ ಆಸಕ್ತಿಯಿರುವದು ಒಂದು ವಿಶೇಷವೆನಲ್ಲ. ಹಾಗಾಗಿ ನನಗೆ ಯಕ್ಷಗಾನದಲ್ಲಿ ಆಸಕ್ತಿ ಇರುವುದರಲ್ಲಿ ದೊಡ್ಡಸ್ತಿಕೆಯೇನೂ ಇಲ್ಲ. ನನ್ನ ಊರಿನ ಆಸ

ಬೆಳಕು ಬಿದ್ದೊಡನೆ (ಕಥೆ )

ಇಮೇಜ್
      ಸು ತ್ತಲೂ ದಟ್ಟ ಕಾಡು. 'ಟಿರ್..ಟಿರ್....ಟಿರ್...ಟಿರ್' ರಸ್ತೆಯ ಅಕ್ಕಪಕ್ಕದ ಮರಗಳಿಂದ ಹುಳಗಳು ಮಾಡುತ್ತಿದ್ದ ಸದ್ದು ರಾತ್ರಿಯ  ಮೌನವನ್ನು ಸೀಳಿ ಕಿವಿಗೆ ತಾಗುತ್ತಿತ್ತು.  ಕಾಡಿನ ಮಧ್ಯೆ ಅಂಕುಡೊಂಕಾಗಿ ಹಾದುಹೋಗಿದ್ದ ನಿರ್ಜನವಾದ ಕಚ್ಚಾ ರಸ್ತೆಯಲ್ಲಿ  ಅವರಿಬ್ಬರೂ ಸರಸರನೆ ಹೆಜ್ಜೆ ಹಾಕುತ್ತಾ ಮುಂದೆ ಸಾಗುತ್ತಿದ್ದರು. ತುಂಬಾ ದೂರದಿಂದ ನಡೆಯುತ್ತಿದ್ದುದರಿಂದ ಆ ತಂಗಾಳಿ ತೀಡುತ್ತಿದ್ದ ವಾತಾವರಣದಲ್ಲೂ ಅವರ ಮೈಯೆಲ್ಲ ಬೆವರಿತ್ತು. "ಇನ್ನೆಷ್ಟು ದೂರ ನಡೀಬೇಕು?" ನಡೆನಡೆದು ಆಯಾಸಗೊಂಡಿದ್ದ ಲಕ್ಷ್ಮಣ ಕೇಳಿದ. "ಇನ್ನು ಸ್ವಲ್ಪವೇ ದೂರ, ಮನೆ ಬಂದೇ ಬಿಡುತ್ತದೆ" ಈಗಾಗಲೆ ಮೂರು ನಾಲ್ಕು ಬಾರಿ ಹೇಳಿದ್ದನ್ನೇ ಮತ್ತೆ ಹೇಳಿದ ಮಂಜಯ್ಯ. "ಇದನ್ನೇ ಆವಾಗಿನಿಂದ ಹೇಳುತ್ತಾ ಇದ್ದೀಯ. ನಿನಗಾದರೂ ಗೊತ್ತಿದೆಯೋ ಇಲ್ವೋ ನಿಜವಾಗಿಯೂ ಎಷ್ಟು ದೂರ ಅಂತ" ಕೇಳಿದ  ಲಕ್ಷ್ಮಣ.  " ಹಗಲಲ್ಲಾದರೆ ದಾರಿ ಸಾಗಿದ್ದೇ ಗೊತ್ತಾಗೋದಿಲ್ಲ ಎಷ್ಟು ದೂರ ಬಂದು ತಲುಪಿದ್ದೀವಿ ಅಂತ ಆರಾಮಾಗಿ ಗೊತ್ತಾಗ್ತದಪ್ಪ. ಈ ರಾತ್ರಿಯಲ್ಲಿ ಹೇಗೆ ಹೇಳೋದು? ಕೈಯ್ಯಲ್ಲಿರೊ  ಲಾಟೀನಿನ ಬೆಳಕಲ್ಲಿ ಮುಂದೆರಡು ಮಾರು ಬಿಟ್ಟು ಬೇರೆನು ಕಾಣ್ತದೆ? ಅಂದಾಜು ಮೇಲೆ ಮಾತಾಡ್ತಾ ಇದ್ದೀನಿ.   ಬಾ ಇಲ್ಲೇ ಸ್ವಲ್ಪ ದೂರ ಹೋದರೆ ಆಯ್ತು" ಸರಸರನೆ ನಡೆಯುತ್ತಲೇ ಇರುವ ಸಮಸ್ಯೆಯನ್ನು ಹೇಳಿದ ಮಂಜಯ್ಯ.         ಲಾಟೀನಿನ ಬೆಳಕನ್